ಶ್ರೀನಿವಾಸ ಆಚಾರ್ಯ
ಬ್ರಹ್ಮಾವರ, ಜು.27: ಬಾರಕೂರು ಶ್ರೀಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿದ್ದ ಕಡೆಕಾರ್ ಶ್ರೀನಿವಾಸ ಆಚಾರ್ಯ (72) ಅಲ್ಪಕಾಲದ ಅಸೌಖ್ಯದಿಂದ ಜು.25ರಂದು ಸ್ವಗೃಹದಲ್ಲಿ ನಿಧನರಾದರು.
ಮೂಲತಃ ಬೆಳ್ಳಂಪಳ್ಳಿಯವರಾದ ಇವರು ಕಡೆಕಾರಿನಲ್ಲಿ ನೆಲೆಸಿ ಉಡುಪಿ ರಥಬೀದಿಯಲ್ಲಿ ಜ್ಯುವೆಲ್ಲರಿ ನಡೆಸುತ್ತಿದ್ದರು. ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಹಾಗೂ ಉಡುಪಿ ಜಿಲ್ಲಾ ವಿಶ್ವಕರ್ಮ ಎಜುಕೇಶ್ ಅಧ್ಯಕ್ಷರಾಗಿದ್ದ ಇವರು, ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠ, ಬೆಳಗುತ್ತಿ ಮಠ ಪುನ ರ್ನಿರ್ಮಾಣ ಯೋಜನಾ ಸಮಿತಿಯ ಉಪಾಧ್ಯಕ್ಷರಾಗಿದ್ದರು.
ಇವರು ಪತ್ನಿ, ಇಬ್ಬರು ಪುತ್ರರು, ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧಾನಕ್ಕೆ ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಅರೆಮಾದನ ಹಳ್ಳಿಯ ಶ್ರೀಶಿವಸುಜ್ಞಾನ ತೀರ್ಥ ಸ್ವಾಮೀಜಿ, ಕಟಪಾಡಿಯ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ವಿಶ್ವ ಬ್ರಾಹ್ಮಣ ಸಂಸ್ಕೃತ ವಿದ್ಯಾಪೀಠದ ಅಧ್ಯಕ್ಷ ಅಲೆವೂರು ಯೋಗೀಶ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಯು.ಕೆ.ಎಸ್.ಸೀತಾರಾಮ ಆಚಾರ್ಯ ಸಂತಾಪ ಸೂಚಿಸಿ ದ್ದಾರೆ.