ಉಳ್ಳಾಲ, ಆ. 9: ದೇರಳಕಟ್ಟೆಯಲ್ಲಿ ಸುದ್ದಿ ಪತ್ರಿಕೆಯ ಏಜೆಂಟ್ ಆಗಿ ದುಡಿಯುತ್ತಿದ್ದ ಕಾನಕೆರೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಸಮದ್ ಕಾನಕೆರೆ ಬುಧವಾರ ನಿಧನರಾದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಮದ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾದರು.