ಕೊಣಾಜೆ, ಡಿ. 12: ಮಂಜೇಶ್ವರ ಬಡಾಜೆ ಅಂಬೇಡ್ಕರ್ ಕಾಲನಿ ನಿವಾಸಿ ರಾಮ (61) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.
ಅವರು ಕೊಲ್ಲರಕೋಡಿ ಸರಕಾರಿ ಶಾಲೆಯಲ್ಲಿ ಸುಮಾರು 10 ವರ್ಷ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.