ಕಾರ್ಕಡ ರಾಮಚಂದ್ರ ಉಡುಪ
ಕೋಟ, ಡಿ.26: ಶಿಕ್ಷಣ ತಜ್ಞ ಕೋಟ ಕಾರ್ಕಡ ರಾಮಚಂದ್ರ ಉಡುಪ (97) ಅಲ್ಪಕಾಲದ ಅಸೌಖ್ಯದಿಂದ ಇಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನ ರಾದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಇವರು ಕೋಟ ವಿವೇಕ ಪದವಿಪೂರ್ವ ಕಾಲೇಜಿ ನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನಾಟಕಕಾರ, ಸಾಹಿತಿಯಾಗಿ ಜನಮನ್ನಣೆ ಗಳಿಸಿದ್ದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟ ತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಪಾರ್ಥಿವ ಶರೀರವನ್ನು ಮಣಿಪಾಲ ಕೆಎಂಸಿಗೆ ದಾನ ಮಾಡಲು ಮನೆಯವರು ನಿರ್ಧರಿಸಿದ್ದಾರೆ.
Next Story