ರಿಯಾಯತಿ ದರದಲ್ಲಿ ಸಿ ಟಿ ಮತ್ತು ಎಂಆರ್ ಐ ಸ್ಕ್ಯಾನಿಂಗ್: ಟಿ.ಬಿ.ಜಯಚಂದ್ರ
ತುಮಕೂರ,ಫೆ.28: ಕರ್ನಾಟಕವು ಗ್ರಾಮೀಣ ಪ್ರದೇಶಗಳ ಮತ್ತು ನಗರ ಪ್ರದೇಶಗಳ ಸಾಮಾನ್ಯ ಜನರಿಗೆ ಆರೋಗ್ಯ ಸೇವೆಗಳನ್ನು ಕೈಗೆಟುಕುವ ದರಗಳಲ್ಲಿ ಒದಗಿಸುವ ನಿಟ್ಟಿನಲ್ಲಿ ಇಡೀ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಉಸ್ತುವಾರಿ ಸಚಿವರಾದ ಟಿ.ವಿ.ಜಯಚಂದ್ರ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ ಸಿಟಿ ಮತ್ತು ಎಂಆರ್ ಐ ಸ್ಕ್ಯಾನಿಂಗ್ ಸೌಲಭ್ಯಗಳನ್ನು ಖಾಸಗೀ ಸಹಭಾಗಿತ್ವದಲ್ಲಿ ಆರಂಭಿಸುತ್ತಿದ್ದು, ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಸಿಟಿ ಸ್ಕ್ಯಾನಿಂಗ್ ಕೇಂದ್ರ ಮತ್ತು ಎಂಆರ್ ಐ ಉದ್ಘಾಟಿಸಿ ಮಾತನಾಡುತಿದ್ದ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಪಡೆಯಲು ರೋಗಿಗಳು ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಬೇಕಾಗಿತ್ತು. ಆದರೆ ಕರ್ನಾಟಕ ಸರಕಾರ ಈ ಸೌಲಭ್ಯವನ್ನು ಜಾರಿಗೆ ತಂದು ಇದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸುತ್ತಿರುವ ಮೂಲಕ ಬಡವರಿಗೂ ಉತ್ತಮ ಆರೋಗ್ಯ ಸೌಲಭ್ಯಗಳು ದೊರಕುವಂತೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ,ಶಾಸಕ ಡಾ.ರಫೀಕ್ ಅಹಮದ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಡಿಹೆಚ್ಓ ಡಾ.ರಂಗಸ್ವಾಮಿ ಮುಂತಾದವರು ಹಾಜರಿದ್ದರು.