ಸತೀಶ್ ಶೆಟ್ಟಿ ಕುರ್ನಾಡು
ಕೊಣಾಜೆ, ಜೂ. 8: ಕುರ್ನಾಡು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ಸತೀಶ್ ಶೆಟ್ಟಿ ಕುರ್ನಾಡು (55) ಅನಾರೋಗ್ಯದಿಂದಾಗಿ ಗುರುವಾರ ನಿಧನರಾದರು.
ಕುರ್ನಾಡು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ನ ಮುಡಿಪು ಘಟಕದ ಅಧ್ಯಕ್ಷರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮುಡಿಪು ಸಮೀಪದ ಹೂ ಹಾಕುವ ಕಲ್ಲಿನಲ್ಲಿ ವಾಸಿಸುತ್ತಿದ್ದ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
Next Story