ಉಡುಪಿ: ಮಾಜಿ ಯೋಧರಿಗೆ ಮನೆಯಂಗಳದಲ್ಲಿ ಸನ್ಮಾನ
ಉಡುಪಿ, ಜು.27: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಪ್ರಯುಕ್ತ ಮನೆ ಅಂಗಳದಲ್ಲಿ ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾರತದ ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಉದ್ಯಾವರ ಪಿತ್ರೋಡಿಯ ಪ್ರಭಾಕರ್ ಮೆಂಡನ್ ಅವರನ್ನು ಶುಕ್ರವಾರ ಗೌರವಿಸಲಾಯಿತು.
ಈ ಸಂದರ್ಭ ಮುಖ್ಯ ಅತಿಥಿ ಡಾ.ಸಂದೀಪ್ ಶೆಟ್ಟಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಸದಸ್ಯರಾದ ತಾರಾನಾಥ್ ಮೇಸ್ತ ಶಿರೂರು, ವಾಸು ಅಂಚನ್ ಉದ್ಯಾವರ, ಯತೀಶ್ ಉದ್ಯಾವರ ಮೊದಲಾದ ವರು ಉಪಸ್ಥಿತರಿದ್ದರು.
Next Story