ಮಂಗಳೂರು ವಕೀಲರ ಸಂಘದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಮಂಗಳೂರು, ಜು.28: ತುಳುನಾಡಿನ ಸಂಸ್ಕೃತಿಯ ಉಳಿವಿಗಾಗಿ ಮಂಗಳೂರು ವಕೀಲರ ಸಂಘದ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಶನಿವಾರ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯಿತು.
ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ.ಎಸ್.ಬೀಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ನ್ಯಾಯವಾದಿ ಪಿ.ಪಿ.ಹೆಗ್ಡೆ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಮೊದಲ ಬಾರಿ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಡೆಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಅಧಿಕ ವಿವಿಧ ತಿಂಡಿತಿನಿಸುಗಳ ಹಾಗೂ ಮಳೆಗಾಲದಲ್ಲಿ ಗ್ರಾಮೀಣ ಭಾಗದ ರೈತರು ಬಳಕೆ ಮಾಡುತ್ತಿದ್ದ ಕೃಷಿ ಮತ್ತಿತರ ಸಲಕರಣೆಗಳ ಪ್ರದರ್ಶನ ಕೂಡಾ ಗಮನ ಸೆಳೆಯಿತು.
Next Story