ಪುತ್ತೂರು: ಬೈಕ್- ಲಾರಿ ಢಿಕ್ಕಿ: ಸವಾರ ಗಂಭೀರ
ಪುತ್ತೂರು, ಜು. 29: ಬೈಕ್ ಮತ್ತು ಲಾರಿಯೊಂದರ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪರ್ಲಡ್ಕ ಬೈಪಾಸ್ನಲ್ಲಿ ನಡೆದಿದೆ.
ಬೈಕ್ ಸವಾರ ಪುತ್ತೂರು ತಾಲೂಕಿನ ಕುರಿಯ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಅಬ್ದುಲ್ ಆಸೀಫ್(21) ಗಾಯಗೊಂಡವರು. ಪಶು ಆಹಾರ ಸಾಗಾಟದ ಲಾರಿ ಮತ್ತು ಅಬ್ದುಲ್ ಆಸೀಫ್ ಅವರು ಸವಾರಿ ನಡೆಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಆಸೀಫ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story