ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು
ಕುಂದಾಪುರ, ಜು. 30: ಬಸ್ರೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರವಿವಾರ ತಡರಾತ್ರಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ.
ದುರ್ಗಾಪರಮೇಶ್ವರಿ ದೇವಿಯ ಬೆಳ್ಳಿಯ ಮುಖವಾಡ ಮತ್ತು ಗಣಪತಿ ಮುಖವಾಡಗಳನ್ನು ಕಳವು ಮಾಡಲಾಗಿದೆ.
ರವಿವಾರ ತಡರಾತ್ರಿ ಸುಮಾರು 12 ರಿಂದ1 ಗಂಟೆಯ ಸುಮಾರಿಗೆ ಕಳ್ಳತನ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ಶ್ರಿಧರ್ ನಾಯಕ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story