ಆ.1ರಂದು ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ: ಐವನ್ ಡಿಸೋಜ
ಮಂಗಳೂರು, ಜು. 30: ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಂಪ್ ವೆಲ್ ವೃತ್ತದ ಬಳಿ ಆ.1ರಂದು ಬೆಳಗ್ಗೆ 11ಕ್ಕೆ ರಸ್ತೆ ತಡೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಹೆದ್ದಾರಿಯ ಅವ್ಯವಸ್ಥೆ ವಿರುದ್ಧ ತೀವ್ರವಾಗಿ ಖಂಡಿಸಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗು ಶೋಭಾ ಕರಂದ್ಲಾಜೆ ಅವರು ರಾಷ್ಟ್ರೀಯ ಹೆದ್ದಾರಿ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ ಸೌಕರ್ಯದ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಾದವರು ಕೇವಲ ಮನವಿ ನೀಡುವ ಕೆಲಸ ಮಾಡುತ್ತಿದ್ದಾರೆ. ದ.ಕ. ಜಿಲ್ಲೆ, ಉಡುಪಿಯ ರಸ್ತೆ ಹೆದ್ದಾರಿ ತೀರಾ ಕಳಪೆಯಾಗಿದೆ. ಕೇಂದ್ರ ಪುರಸ್ಕೃತ ಯೋಜನೆ ಗಳು ಕರಾವಳಿಗೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಅವರು ಹೇಳಿದರು.
Next Story