ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ: ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ
ಬಂಟ್ವಾಳ, ಜು. 30: ವಿದ್ಯಾಭಾರತಿಯ ಕರ್ನಾಟಕ ಪ್ರಾಂತಕ್ಕೊಳಪಟ್ಟ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮವನ್ನು ಹಿರಿಯ ಕಬಡ್ಡಿ ಆಟಗಾರರಾದ ವೆಂಕಟ್ರಮಣ ಬಳ್ಳುಕರಾಯ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್, ವಿದ್ಯಾಭಾರತಿ ಪ್ರಾಂತ ನೈತಿಕ, ಆಧ್ಯಾತ್ಮಿಕ ವಿಷಯ ಪ್ರಮುಖರಾದ ವೆಂಕಟ್ರಮಣ ರಾವ್ ಈ ಸಂದರ್ಭ ಉಪಸ್ಥಿತರಿದ್ದರು.
ಮಧ್ಯಾಹ್ನದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕಾ ಉಳಿಪ್ಪಾಡಿ ಅವರು ಕಬಡ್ಡಿ ಪಂದ್ಯಾಕೂಟವನ್ನು ವೀಕ್ಷಿಸಿದರು. ಮನೋಜ್ ರೈ ಸ್ವಾಗತಿಸಿದರು. ಗೋಪಾಲ ಎಂ. ವಂದಿಸಿದರು. ಕಾರ್ಯಕ್ರಮವನ್ನು ಜಿನ್ನಪ್ಪ ಏಳ್ತಿಮಾರ್ ನಿರೂಪಿಸಿದರು. 18 ಜಿಲ್ಲೆಗಳಿಂದ ಕಬಡ್ಡಿ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.
Next Story