ಸೌದಿಯಲ್ಲಿ ಮೃತಪಟ್ಟ ಹೆಝಲ್ ಮನೆಗೆ ಐವನ್ ಡಿಸೋಜ ಭೇಟಿ
ಕಾಪು, ಜು. 30: ಸೌದಿ ಅರೇಬಿಯಾದ ಅಲ್ಮಿಕ್ವಾದ್ ಸರಕಾರಿ ಆಸ್ಪತ್ರೆಯಲ್ಲಿ ನಿಗೂಢ ಸಾವನ್ನಪ್ಪಿದ ಹೆಝಲ್ ಅವರ ಶಿರ್ವದ ಮನೆಗೆ ಸೋಮವಾರ ಸಂಜೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಅವರ ಕುಟುಂಬದವರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದ ಅವರು, ಮೃತದೇಹ ಊರಿಗೆ ತರಲು ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಲ್ಲಿ ಮಾತುಕತೆ ನಡೆಸಲಾಗಿದೆ. ಕೇಂದ್ರದ ವಿದೇಶಾಂಗ ಮಂತ್ರಿಯವರಿಗೂ ತಿಳಿಸಿಸಲಾಗಿದೆ. ಇದೊಂದು ಆತ್ಮಹತ್ಯೆ ಅಲ್ಲ ಈ ನಿಗೂಢ ಸಾವಿನ ಬಗ್ಗೆ ಕೂಲಂಕುಷ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಮಂಗಳೂರು ಇಂಟರ್ ಅಧ್ಯಕ್ಷ ಪುನೀತ್ ಶೆಟ್ಟಿ, ಕಾರ್ಯದರ್ಶಿ ಮುಬಸ್ಶಿರ್, ತಾಲ್ಲೂಕು ಪಂಚಾಯತ್ ಸದಸ್ಯ ಮೈಕಲ್ ಡಿಸೋಜ, ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕ ಮುಹಮ್ಮದ್ ಫಾರೂಕ್ ಚಂದ್ರನಗರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಮತ್ತಿತರರು ಉಪಸ್ಥಿತರಿದ್ದರು.
Next Story