ಮಂಗಳೂರು: ಮಹಾನಗರ ಪಾಲಿಕೆಯಿಂದ ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ
ಮಂಗಳೂರು, ಜು. 31: ನಗರದ ಜನನಿಬಿಡ ಪ್ರದೇಶವಾದ ಸ್ಟೇಟ್ ಬ್ಯಾಂಕ್ ಸಮೀಪ ಮಹಾನಗರ ಪಾಲಿಕೆಯಿಂದ ಪೊಲೀಸ್ ಬಂದೋಬಸ್ತ್ ನಲ್ಲಿ ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ಮಂಗಳವಾರ ಬೆಳಗ್ಗೆ ನಡೆಸಲಾಯಿತು.
ಯಾವುದೇ ಸೂಚನೆ ನೀಡದೇ ತಮ್ಮ ಮೇಲೆ ದಾಳಿ ಮಾಡಿದ್ದಾರೆ. ಹೊಟ್ಟೆಪಾಡಿಗಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ವಹಿವಾಟು ಮಾಡುತ್ತಿದ್ದೇವೆ. 'ಬೀದಿಬದಿ ವ್ಯಾಪಾರಸ್ಥರ ವಲಯ' ಇದ್ದರೂ ಅದಕ್ಕೆ ಮಹಾನಗರ ಪಾಲಿಕೆಯಿಂದ ಸಮರ್ಪಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಹೀಗಾದರೆ ವ್ಯಾಪಾರಸ್ಥರು ಬದುಕು ನಡೆಸುವುದಾದರೂ ಹೇಗೆ ಎಂದು ಬೀದಿಬದಿಯ ವ್ಯಾಪಾರಸ್ಥರು ದೂರಿದರು.
Next Story