ಯಡ್ತರೆ ಅತ್ಯಾಚಾರ ಪ್ರಕರಣ: ಆ.3ರಂದು ಶಿಕ್ಷೆ ಪ್ರಮಾಣ ಪ್ರಕಟ
ಕುಂದಾಪುರ, ಆ.1: ಯಡ್ತರೆ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಯೋಗೀಶ್ (22) ಎಂಬಾತನನ್ನು ದೋಷಿ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, ಈ ಸಂಬಂಧ ಶಿಕ್ಷೆಯ ಪ್ರವಾಣವನ್ನು ಆ.3ರಂದು ಪ್ರಕಟಿಸಲಿದೆ.
ಯಡ್ತರೆ ಗ್ರಾಮದ ತೂದಳ್ಳಿಯ ರೆಸಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಅದೇ ರೆಸಾರ್ಟ್ನಲ್ಲಿ ವಾಹನ ಚಾಲಕನಾಗಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮೂಲದ ಯೋಗೀಶ್ ಮದುವೆಯಾಗುವುದಾಗಿ ನಂಬಿಸಿದ್ದನು. 2014ರ ಜುಲೈ ತಿಂಗಳಲ್ಲಿ ಯೋಗೀಶ್ ಆಕೆಯ ಮೇಲೆ ಅತ್ಯಾ ಚಾರ ಎಸಗಿ ಗರ್ಭಿಣಿಯಾಗುವಂತೆ ಮಾಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್ ಈ ಬಗ್ಗೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ, ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿ ಪ್ರಾಯ ಪಟ್ಟು, ದೋಷಿ ಎಂದು ಘೋಷಿಸಿ ತೀರ್ಪು ನೀಡಿದರು. ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾ್ಚಂದ್ರ ಶೆಟ್ಟಿ ವಾದ ಮಂಡಿಸಿದ್ದರು.