ಅಂಜುಮನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾದ್ಯಾಪಕ ಫಾಲಚಂದ್ರರಿಗೆ ಪಿಎಚ್ಡಿ ಪದವಿ
ಭಟ್ಕಳ, ಆ. 2: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇಲ್ಲಿನ ಅಂಜುಮನ್ ಎಂಜಿನಿಯರಿಂಗ್ ಕಾಲೇಜಿನ ಪ್ರೊ. ಫಾಲಚಂದ್ರ ಎಚ್.ಎಂ. ಅವರಿಗೆ ಪಿಎಚ್ ಡಿ ಪ್ರದಾನ ಮಾಡಿದೆ.
“Role of moulding water content on the strength behavior of shedi soil in presence of industrial wastes and other additives” ಅವರು ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಂಡಿಸಿದ್ದ ಎಂಬ ಸಂಶೋಧನಾ ಪ್ರಬಂಧಕ್ಕೆ ಪಿಎಚ್ಡಿ ನೀಡಲಾಗಿದೆ.
ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ (ಬಿಟಿಐ) ಪ್ರಾಚಾರ್ಯ ಡಾ.ಎಚ್.ಎಸ್.ನಂದಾ ಹಾಗೂ ಬೆಂಗಳೂರಿನ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಪ್ರಾಚಾರ್ಯ ಡಾ.ಎಚ್.ಎನ್.ರಮೇಶ್ ಅವರ ಮಾರ್ಗದರ್ಶನದಲ್ಲಿ ಅವರು ಈ ಪ್ರಬಂಧ ಮಂಡಿಸಿದ್ದರು.
ಫಾಲಚಂದ್ರ ಅವರು ಇಲ್ಲಿನ ಅಂಜುಮನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ 25 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಅವರು ಸಿವಿಲ್ ವಿಭಾಗದ ಮುಖ್ಯಸ್ಥರಾಗಿಯೂ, ಉಪಪ್ರಾಚಾರ್ಯರಾಗಿಯೂ ಕರ್ತವ್ಯ ನಿಭಾಯಿಸುತ್ತಿದ್ದಾರೆ.
ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಹೊನಗೋಡಿನ ರಾಧಮ್ಮ ಹಾಗೂ ಮಹಾಬಲಯ್ಯ ದಂಪತಿಯ ಪುತ್ರ.