ಬಿಐಟಿ, ಬೀಡ್ಸ್ : ವನಮಹೋತ್ಸವ ಆಚರಣೆ
ಮಂಗಳೂರು, ಆ. 2: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಹಾಗು ಬ್ಯಾರೀಸ್ ಎನ್ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್) ವಿದ್ಯಾಸಂಸ್ಥೆಯಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು.
ಜೀತ್ ಮಿಲನ್ ರೋಷ್, ಡೇನಿಯಲ್ ತೌರೊ ಮತ್ತು ಉಪವಲಯ ಅರಣ್ಯಾಧಿಕಾರಿ ರವಿಕುಮಾರ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರೀಸ್ ಸಮೂಹದ ಅಧ್ಯಕ್ಷರಾದ ಸೈಯ್ಯದ್ ಮುಹಮ್ಮದ್ ಬ್ಯಾರಿ ಅವರು ಮಾತನಾಡಿ, ಗಿಡಮರಗಳೊಡನೆ ವೈಯಕ್ತಿಕ ಅನುಬಂಧವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೀಡ್ಸ್ನ ಪ್ರಾಂಶುಪಾಲ ಪ್ರೊ. ಅಶೋಕ ಎಲ್.ಪಿ.ಮೆಂಡೋನ್ಸಾ ಅವರು ಉದ್ಘಾಟನಾ ಭಾಷಣವನ್ನು ಮಾಡಿದರು. ಬಿಐಟಿನ ಪ್ರಾಂಶುಪಾಲ ಡಾ. ಆ್ಯಂಟನಿ ಎ.ಜೆ ಅವರು ಮರಗಳು ಮತ್ತು ಅರಣ್ಯಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಸಾಮಾಜಿಕ ಹೊಣೆಗಾರಿಕೆಯ ಕುರಿತು ಮಾತನಾಡಿದರು.
ಎನ್ವಿರಾನ್ಮೆಂಟ್ ಆ್ಯಂಡ್ ಎಕಾಲಜಿ ಕ್ಲಬ್ನ ಆಶಾ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭ ಕರ್ನಾಟಕ ಅರಣ್ಯ ಇಲಾಖೆಯ ಸಹ ಯೋಗದೊಂದಿಗೆ ಪ್ರತಿಯೊಬ್ಬ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಹೆಸರಿನಲ್ಲಿ 350 ಸಸಿಗಳನ್ನು ನೆಡಲಾಯಿತು. ಪ್ರಥಮ ವರ್ಷದ ವಿದ್ಯಾರ್ಥಿಗಳು, ಬೋಧಕರು ಮತ್ತು ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.