ಗಾಂಜಾ ಸೇವನೆ: ನಾಲ್ವರ ಬಂಧನ
ಮಂಗಳೂರು, ಆ.3: ಉರ್ವಸ್ಟೋರ್ ರೇಡಿಯೊ ಪಾರ್ಕ್ ಬಳಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಶುಕ್ರವಾರ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ದೇರೇಬೈಲ್ ನಿವಾಸಿ ಶುಭಂ, ಅಶೋಕನಗರ ನಿವಾಸಿಗಳಾದ ವಿಘ್ನೇಶ್ ಅಂಚನ್, ಗೌರವ್ ಪೂಜಾರಿ, ಪ್ರಥಮೇಶ್ ದೇವಾಡಿಗ ಎಂದು ಗುರುತಿಸಲಾಗಿದೆ.
ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಉರ್ವ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Next Story