ಕಾಂಗ್ರೆಸ್ ಬಗ್ಗೆ ಭೋಜೇಗೌಡರ ಹೇಳಿಕೆ ಸರಿಯಲ್ಲ: ಸಚಿವ ಯು.ಟಿ.ಖಾದರ್
ಮಂಗಳೂರು, ಆ. 4: ಕಾಂಗ್ರೆಸ್ ಬಗ್ಗೆ ಭೋಜೇಗೌಡರ ಹೇಳಿಕೆ ಸರಿಲ್ಲ. ಕಾಂಗ್ರೆಸ್ ಪಕ್ಷ ದೇಶದ ಸಂವಿಧಾನದ ಆಶಯದಂತೆ ನಡೆದುಕೊಂಡು ಬಂದಿದೆ. ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನತೆಯಿಂದ ಕಾಣುತ್ತಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾರನ್ನೂ ಕಡೆಗಣಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
‘ಕರಾವಳಿಯಲ್ಲಿ ಕಾಂಗ್ರೆಸ್ ನೆಲಕಚ್ಚಿರುವುದಕ್ಕೆ ಹಿಂದೂಗಳನ್ನು ಕಾಂಗ್ರೆಸ್ ಕಡೆಗಣಿಸಿರುವುದು ಕಾರಣ’ಎಂದು ಜೆಡಿಎಸ್ ಮುಖಂಡ ಭೋಜೇ ಗೌಡರು ಪತ್ರಿಕಾಗೋಷ್ಟಿಯಲ್ಲಿಂದು ನೀಡಿದ ಹೇಳಿಕೆ ಸರಿಯಲ್ಲ. ಈ ರೀತಿಯ ರಾಜಕೀಯ ಪ್ರೇರಿತ ಹೇಳಿಕೆ ಅವರ ಘನತೆಗ ಕಪ್ಪು ಚುಕ್ಕೆ. ಅವರು ಈ ಜಿಲ್ಲೆಯವರಲ್ಲ ಆ ಕಾರಣದಿಂದ ಈ ಜಿಲ್ಲೆಯ ಬಗ್ಗೆ ಅವರಿಗೆ ಗೊತ್ತಿಲ್ಲ. ಅವರ ಹೇಳಿಕೆಯ ಬಗ್ಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ. ಈ ರೀತಿಯ ಹೇಳಿಕೆಗಳಿಂದ ಪಕ್ಷದ ಸಂಘಟನೆ ಸಾಧ್ಯವಿಲ್ಲ. ಜನರೊಂದಿಗೆ ಸೇರಿ ಜನರ ಕೆಲಸ ಮಾಡಿ ಪಕ್ಷವನ್ನು ಸಂಘಟಿಸಲಿ ಎಂದು ಸಚಿವ ಖಾದರ್ ಪ್ರತಿಕ್ರಿಯೆ ನಿಡಿದ್ದಾರೆ.
Next Story