ಜೋಗಿಗೆ ವಡ್ಡರ್ಸೆ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
ಬ್ರಹ್ಮಾವರ, ಆ.5: ಪತ್ರಕರ್ತರು ಮುಖ್ಯವಾಗಿ ಸುದ್ದಿಯ ಅವಸರ, ಅಳತೆ, ಅಜ್ಞಾನ ಮತ್ತು ಸಕಾಲಿಕತೆ ಈ ಅಂಶಗಳ ಕುರಿತು ವಿಶ್ಲೇಷಣೆ ಮಾಡಿಕೊಳ್ಳ ಬೇಕು ಎಂದು ಸಾಹಿತಿ ಹಾಗೂ ಪತ್ರಕರ್ತ ಗಿರೀಶ್ ರಾವ್ ಹತ್ವಾರ್(ಜೋಗಿ) ಅಭಿಪ್ರಾಯ ಪಟ್ಟಿದ್ದಾರೆ.
ಬ್ರಹ್ಮಾವರದ ಬಂಟರ ಭವನದಲ್ಲಿ ರವಿವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನೀಡಲಾದ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋ ದ್ಯಮ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡುತಿದ್ದರು.
ವೃತ್ತಿ ಬದುಕಿನ ಅಪಾಯಗಳನ್ನು ಅರ್ಥ ಮಾಡಿಕೊಂಡು ಹೊರಬರುವ ಪ್ರಯತ್ನವನ್ನು ಪತ್ರಕರ್ತರು ಮಾಡಬೇಕು. ಪತ್ರಿಕೋದ್ಯಮ ವೃತ್ತಿಯನ್ನು ಹೆಚ್ಚು ಮೌಲ್ಯವಾಗಿಸುವತ್ತ ಅವರು ಪ್ರಯತ್ನಿಸಬೇಕು ಎಂದು ಹೇಳಿದರು.
ಸಾಹಿತಿ ಜಯಂತ್ ಕಾಯ್ಕಿಣಿ ಮಾತನಾಡಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಪಠ್ಯದ ಜೊತೆಗೆ ಮನುಷ್ಯ ಪ್ರೀತಿ, ಸಾಹಿತ್ಯಾಸಕ್ತಿ ಹಾಗೂ ಜೀವನಾಸಕ್ತಿ ಬೆಳೆಸಿಕೊಂಡಲ್ಲಿ ಉತ್ತಮ ಪತ್ರಕರ್ತನಾಗಿ ಮೂಡಿಬರಲು ಸಾಧ್ಯ ಎಂದರು. ಪತ್ರಿಕೋದ್ಯಮ ಪದವು ಇಂದು ಮಾಧ್ಯಮವನ್ನು ಉದ್ಯಮವಾಗಿ ಬಿಂಬಿಸುವುದರಿಂದ ಇದಕ್ಕೆ ಪರ್ಯಾಯ ಪದ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಸಾಹಿತಿ ಜಯಂತ್ ಕಾಯ್ಕಿಣಿ ಮಾತನಾಡಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಪತ್ರಿಕೋದ್ಯಮದ ಪಠ್ಯದ ಜೊತೆಗೆ ಮನುಷ್ಯ ಪ್ರೀತಿ, ಸಾಹಿತ್ಯಾಸಕ್ತಿ ಹಾಗೂ ಜೀವನಾಸಕ್ತಿ ಬೆಳೆಸಿಕೊಂಡಲ್ಲಿ ಉತ್ತಮ ಪತ್ರಕರ್ತನಾಗಿ ಮೂಡಿಬರಲು ಸ್ಯಾಎಂದರು.ಪತ್ರಿಕೋದ್ಯಮಪದವುಇಂದುಮ್ಯಾಮವನ್ನು ಉದ್ಯಮವಾಗಿ ಬಿಂಬಿಸುವುದರಿಂದ ಇದಕ್ಕೆ ಪರ್ಯಾಯ ಪದ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಸಮಾರಂಭವನ್ನು ಉದ್ಘಾಟಿಸಿದ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ ಸಾಮಾನ್ಯ ಜನರು ನಂಬುವ ಮಾಧ್ಯಮ ಪತ್ರಿಕಾ ಮಾಧ್ಯಮವಾಗಿದ್ದು, ಸಾಮಾಜಿಕ ಬದ್ಧತೆ ಕಳಕಳಿ ಇಂದಿನ ಮಾಧ್ಯಮಗಳ ತುರ್ತು ಅಗತ್ಯ ಎಂದರು.
ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಪಾನೀಯ ನಿಗಮ ಆರ್ಥಿಕ ಸಲಹೆಗಾರ ಹಾಗೂ ಬೆಂಗಳೂರು ಜಲಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಹೈದರಾಬಾದ್ನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಸಂಚಾಲಕ ಸುದರ್ಶನ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಹನ್ ಉಡುಪ ವಂದಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ಕೋಟ ಸುರೇಶ್ ಬಂಗೇರ ಸಂಯೋಜನೆಯಲ್ಲಿ ರಾಜಾರುದ್ರಕೋ ಯಕ್ಷಗಾನ ಪ್ರದರ್ಶನಗೊಂಡಿತು.