ಭಟ್ಕಳ: ಟ್ರಕ್ ಢಿಕ್ಕಿ; ಕಂದಕಕ್ಕೆ ಉರುಳಿಬಿದ್ದ ಟೆಂಪೊ; ಓರ್ವ ಮೃತ್ಯು
15 ಮಂದಿಗೆ ಗಾಯ
ಭಟ್ಕಳ, ಆ. 5: ಭಟ್ಕಳದಿಂದ ಮುರುಡೇಶ್ವರಕ್ಕೆ ಹೋಗುತ್ತಿದ್ದ ಪ್ಯಾಸೆಂಜರ್ ಟೆಂಪೊಗೆ ಹಿಂಬದಿಯಿಂದ ಬಂದ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟೆಂಪೊ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ರವಿವಾರ ಶಿರಾಲಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಬಳಿ ನಡೆದಿದೆ.
ಮೃತರನ್ನು ಶಿರಾಲಿ ಸಾರದೊಳೆ ನಿವಾಸಿ ಭೈರಪ್ಪ ಮಾಸ್ತಿ ನಾಯ್ಕ (50) ಎಂದು ಗುರುತಿಸಲಾಗಿದೆ.
ಭಟ್ಕಳದಿಂದ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟೆಂಪೊ ಸಾರದೊಳೆ ಬಳಿ ತಮ್ಮ ಸ್ಟಾಫ್ ಸಮೀಪಿಸುತ್ತಿದ್ದಂತೆ ಭೈರಪ್ಪ ಟೆಂಪೋ ನಿಲ್ಲಿಸಿ ಇಳಿದಿದ್ದು ಈ ವೇಳೆ ಹಿಂಬದಿಯಿಂದ ಬಂದ ಟ್ರಕ್ ಟೆಂಪೊಗೆ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಭೈರಪ್ಪಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇತರ 15 ಮಂದಿಗೆ ಗಾಯಗಳಾಗಿದ್ದು, ಅವರಿಗೆ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story