ಮಂಗಳ ಕ್ರೀಡಾಂಗಣಕ್ಕೆ ಸಚಿವ ಖಾದರ್ ಭೇಟಿ
ಮಂಗಳೂರು, ಆ.5: ನಗರದ ಮಂಗಳ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.
ರವಿವಾರ ಬೆಳಗ್ಗೆ ಮಂಗಳ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಕ್ರೀಡಾಂಗಣದ ಸಮಸ್ಯೆಗಳ ಬಗ್ಗೆ ಕ್ರೀಡಾಂಗಣ ಸಮಿತಿಯ ಪದಾಧಿಕಾರಿ ಗಳೊಂದಿಗೆ ಚರ್ಚಿಸಿದರು.
ಮಂಗಳ ಕ್ರೀಡಾಂಗಣದ ಅಭಿವೃದ್ಧಿಗೆ ಸಂಪನ್ಮೂಲ ಕ್ರೋಢೀಕರಿಸಲು ಮಳಿಗೆಗಳ ವಾಣಿಜ್ಯೀಕರಣಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದ ಅವರು ಎಂಆರ್ಪಿಎಲ್ ಮತ್ತು ಬ್ಯಾಂಕ್ಗಳ ನೆರವನ್ನು ಪಡೆಯುವಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಕ್ರೀಡಾಂಗಣಕ್ಕೆ ನೀರು, ದೀಪದ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೇಯರ್ ಭಾಸ್ಕರ್ ಮೊಯ್ಲಿ, ಅಪರ ಜಿಲ್ಲಾಧಿಕಾರಿ ಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.
Next Story