ಆ.8ರಂದು ಗ್ರಾಮೋತ್ಸವ- ಗುರುವಂದನೆ
ಮಂಗಳೂರು, ಆ.6: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಶ್ರೀಗಳ ಜನ್ಮ ದಿನೋತ್ಸವ ಸಮಿತಿ ವತಿಯಿಂದ ಆ.8ರಂದು ಗ್ರಾಮೋತ್ಸವ 2018 ಹಾಗೂ ಗುರುವಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ ತಿಳಿಸಿದ್ದಾರೆ.
ಬೆಳಗ್ಗೆ 8ರಿಂದ ಶ್ರೀಗಣಪತಿ ಹವನ, ಆರಾಧ್ಯ ದೇವರಿಗೆ ಮಹಾಪೂಜೆ, 9:30ರಿಂದ ಪಾದಪೂಜೆ, ತುಲಾಭಾರ, ಉಯ್ಯಾಲೆ ಸೇವೆ, ಗುರುವಂದನೆ, 11ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ ಪೆರ್ಲ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3 ಗಂಟೆಗೆ ಶ್ರೀ ದತ್ತ ಯಕ್ಷಾಮೃತ ಯಕ್ಷರೂಪಕ, ರಾತ್ರಿ 7ರಿಂದ ಶ್ರೀ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ಮಹಾಪೂಜೆ ನಡೆಯಲಿದೆ ಎಂದವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ವಿವಿಧ ಸಂಘಟನೆಗಳಿಂದ ಗುರುವಂದನೆ, ಔಷದೀಯ ಸಸಿಗಳ ವಿತರಣೆ, ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ವೈದ್ಯಕೀಯ ಶುಶ್ರೂಷೆಗೆ ಸಹಾಯ, ಸಾರ್ವಜನಿಕ ಸಂಘ ಸಂಸ್ಥೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರ-ಧಾರ್ಮಿಕ ಕಾರ್ಯಕ್ರಮಗಳಿಗೆ ಧನ ಸಹಾಯ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಲೋಕನಾಥ ಜಿ. ಶೆಟ್ಟಿ, ಉಪಾಧ್ಯಕ್ಷ ಜಯಂತ್ ಜೆ. ಕೋಟ್ಯಾನ್, ಕೋಶಾಧಿಕಾರಿ ಬಿ.ಕೆ.ಚಂದ್ರಶೇಖರ್, ಎಚ್.ಕೆ.ಪುರುಷೋತ್ತಮ್ ಉಪಸ್ಥಿತರಿದ್ದರು.