ಬ್ಯಾರಿ ಸದ್ಭಾವನಾ ವೇದಿಕೆಯಿಂದ ಸಚಿವ ಖಾದರ್ಗೆ ಸನ್ಮಾನ
ಮಂಗಳೂರು,ಆ.6: ಕರ್ನಾಟಕ ಬ್ಯಾರಿ ಸದ್ಭಾವನಾ ವೇದಿಕೆ ಉಳ್ಳಾಲ ಇದರ ವತಿಯಿಂದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ಗೆ ಅಭಿನಂದನೆ ಮತ್ತು ನಿವೃತ ಶಿಕ್ಷಕಿಯರಿಗೆ ಗೌರವಾರ್ಪಣೆ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರದ ಖಾಸಗಿ ಹೊಟೇಲಿನಲ್ಲಿ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್ ತಾನು ಯಾವುದೇ ಹುದ್ದೆಯಲ್ಲಿದ್ದರೂ ಜನರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತೇನೆ. ತಾಳ್ಮೆಯಿಂದಿದ್ದು, ಎಲ್ಲರನ್ನೂ ಸಮಾನವಾಗಿ ಕಂಡರೆ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಸಕಲೇಶಪುರ ಪುರಸಭೆಯ ಮಾಜಿ ಅಧ್ಯಕ್ಷ ಇಬ್ರಾಹೀಂ ಯಾದ್ಗಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಅನುಪಮಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮ, ಉಳ್ಳಾಲ ಅಬ್ಬಕ್ಕ ಬಸದಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯೆ ಆಯಿಶಾ ಯು.ಕೆ, ಅಮೃತ ಪ್ರಕಾಶನ ಮಾಸಿಕದ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು, ಮಂಗಳೂರು ಅಭಿಷ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ನ ನಿರ್ದೇಶಕಿ ಕವಿತಾ ಜೈನ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ದೇವಕಿ ಉಳ್ಳಾಲ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಕರ್ನಾಟಕ ಬ್ಯಾರಿ ಸದ್ಭಾವನಾ ವೇದಿಕೆಯ ಸಂಚಾಲಕ ಯು.ಕೆ.ಯೂಸುಫ್, ಇಸ್ಮಾಯೀಲ್ ಪೊಡಿಮೋನು, ಯು.ಕೆ.ಅಬ್ಬಾಸ್ ಕೋಟೆಪುರ, ಯು.ಕೆ.ನಝೀರ್ ಉಪಸ್ಥಿತರಿದ್ದರು.
ನಿವೃತ ಶಿಕ್ಷಕಿಯರಾದ ರತ್ನಾವತಿ ಜೆ,ಬೈಕಾಡಿ, ಶಹನಾಝ್ ಬಾನು, ಲೀಲಾವತಿ ಎಂ, ಟಿ.ಕೆ.ಸರೋಜ ಕುಮಾರಿ, ಲೆನ್ನಿ ಸವರಿನ್ ಡಿಸೋಜ, ನುಝಹತ್ತುನ್ನೀಸ ಅವರನ್ನು ಗೌರವಿಸಲಾಯಿತು.
ಕರ್ನಾಟಕ ಬ್ಯಾರಿ ಸದ್ಭಾವನಾ ವೇದಿಕೆಯ ಸಂಚಾಲಕ ಅಬ್ದುಲ್ ಅಝೀಝ್ ಹಕ್ ಸ್ವಾಗತಿಸಿದರು. ಅಯ್ಯೂಬ್ ಯು.ಪಿ. ವಂದಿಸಿದರು. ಮುಖ್ಯ ಶಿಕ್ಷಕ ಕೆ.ಎಂ.ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.