ಗುರುವಾಯನಕೆರೆ: ಯುವಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ
ಬೆಳ್ತಂಗಡಿ, ಆ.6: ಗುರುವಾಯನಕೆರೆಯ ಅರೆಮಲಬೆಟ್ಟ ಎಂಬಲ್ಲಿನ ಯುವಕನೋರ್ವನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ಕುವೆಟ್ಟು ಗ್ರಾಮದ ಕಡಂಬು ಮನೆಯ ಸುಧೀಶ್ (34) ಎಂದು ಗುರುತಿಸಲಾಗಿದೆ.
ಇಂದು ಸಂಜೆಯ ವೇಳೆ ಮೃತದೇಹವೊಂದು ಕೆರೆಯಲ್ಲಿ ತೇಲಾಡುತ್ತಿರುವುದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಶವ ಮೇಲಕ್ಕೆತ್ತಿದ್ದಾರೆ.
ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story