ಆರೂರು: ಸಾಮಾಜಿಕ ಪರಿಶೋಧನೆ ಸಭೆ
ಉಡುಪಿ, ಆ.6: 2018-19ನೇ ಸಾಲಿನ ಪ್ರಥಮ ಹಂತದ ಮಹಾತ್ಮ ಗಾಂಧಿಜೀ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಆರೂರು ಗ್ರಾಮ ಸಭೆಯು ಉಡುಪಿ ಕಾರ್ಮಿಕ ನಿರೀಕ್ಷಕ ರಾಮಮೂರ್ತಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರಗಿತು.
ಸಭೆಯಲ್ಲಿ ಆರೂರು ಗ್ರಾಪಂ ಅಧ್ಯಕ್ಷ ರಾಜೀವ್ ಕುಲಾಲ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ತಾಲೂಕು ಸಂಯೋಜಕ ಸುರೇಂದ್ರ ಹಾಗೂ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳು ಹಾಜರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಬಾಳಿಗಾ ಕಾರ್ಯಕ್ರಮ ನಿರೂಪಿಸಿದರು.
Next Story