ಕಳಸ: ಪ್ರಪಾತಕ್ಕೆ ಉರುಳಿದ ಕಾರು
ಚಿಕ್ಕಮಗಳೂರು, ಆ.7: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪ್ರಪಾತಕ್ಕೆ ಉರುಳಿದ ಘಟನೆ ಕಳಸ ಸಮೀಪದ ಕಚಗಾನೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದವರು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಚಗಾನೆ ಗ್ರಾಮದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ.
ಗಾಯಾಳುಗಳನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story