ವಿಶ್ವಕರ್ಮ ಸಮುದಾಯದ ಅವಹೇಳನ: ಸೆನ್ಗೆ ದೂರು
ಉಡುಪಿ, ಆ.7: ವಿಶ್ವಕರ್ಮ ಸಮುದಾಯವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ವಿಶ್ವಕರ್ಮ ಒಕ್ಕೂಟ ಮಂಗಳವಾರ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿತು.
ಈ ವಿಚಾರಕ್ಕೆ ಸಂಬಂಧಿಸಿ ಕಳೆದ ತಿಂಗಳು ನೀಡಿದ ದೂರಿನಲ್ಲಿ ನಮೂದಿಸ ಲಾದ ಭರತ್ ಆಳ್ವ ಕಟಪಾಡಿ ಕಾಳಿಕಾಂಬಾ ದೇವಸ್ಥಾನಕ್ಕೆ ಬಂದು ಶ್ರೀದೇವಿಯ ಸನ್ನಿಧಿಯಲ್ಲಿ ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತವಾಗಿ ಕ್ಷಮೆಯಾಚನೆ ಮಾಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧದ ದೂರನ್ನು ಹಿಂಪಡೆಯಬೇಕು ಎಂದು ದೂರಿ ನಲ್ಲಿ ತಿಳಿಸಲಾಗಿದೆ.
ತುಳುನಾಡು ಎಕ್ಸ್ಪ್ರೆಸ್ ಹೆಸರಿನಲ್ಲಿ ಸಂದೇಶ ಹರಡಿಸಿದ ಪ್ರದೀಪ್ ಶೆಟ್ಟಿ ಈವರೆಗೆ ತನ್ನ ತಪ್ಪನ್ನು ಒಪ್ಪಿಕೊಳ್ಳದ ಕಾರಣ ಅವರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಹಾಗೂ ಪ್ರಥಮ ವರ್ತಮಾನ ವರದಿ ದಾಖಲಿಸುವಂತೆ ದೂರಿ ನಲ್ಲಿ ವಿನಂತಿಸಲಾಗಿದೆ.
ಈ ದೂರನ್ನು ಒಕ್ಕೂಟ ಅಧ್ಯಕ್ಷ ಸೀತಾರಾಮ ಆಚಾರ್ಯ ಸೆನ್ ಪೊಲೀಸ್ ನಿರೀಕ್ಷಕ ಸೀತಾರಾಮ್ಗೆ ಸಲ್ಲಿಸಿದರು. ಈಗಾಗಲೇ ಈ ಸಂಬಂಧ ದೂರನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಎಲ್ಲರನ್ನು ಕರೆಸಿ ವಿಚಾರಣೆ ನಡೆಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ನಿರೀಕ್ಷಕ ಸೀತಾರಾಮ್ ತಿಳಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೆ.ಮುರಳೀಧರ, ಕಾರ್ಪೆಂಟರ್ ಯೂನಿ ಯನ್ನ ಅಧ್ಯಕ್ಷ ಗೋಕುಲ್ ಆಚಾರ್ಯ ನಿಟ್ಟೂರು, ಪ್ರಧಾನ ಕಾರ್ಯದರ್ಶಿ ಜಯಕರ ಆಚಾರ್ಯ ಬೈಲೂರು, ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ ಕಪ್ಪೆಟ್ಟು, ವಿಶ್ವಕರ್ಮ ಯುವ ಸಂಘಟನೆ ಕಾಪು ವಲಯ ಅಧ್ಯಕ್ಷ ಗಣೇಶ್ ಆಚಾರ್ಯ ಉಚ್ಚಿಲ ಮೊದಲಾದವರು ಹಾಜರಿದ್ದರು.