ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ
ಉಡುಪಿ, ಆ.7: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2018-19ನೇ ಸಾಲಿನಲ್ಲಿ ‘ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ’ಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸರಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯ ಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲ್ಯಕ್ಕೆ ಸಹಾಯ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಅಯಾ ವರ್ಷಕ್ಕೆ ಲ್ಯವಿರುವ ಅನುದಾನಕ್ಕೆ ತಕ್ಕಂತೆ ಪ್ರತಿ ತಿಂಗಳೂ 1,500 ರೂ.ನಂತೆ ಶೈಕ್ಷಣಿಕ ಅವಧಿಯ ಹತ್ತು ತಿಂಗಳಿಗೆ ಒಟ್ಟು 15,000 ರೂ. ಗಳನ್ನು ಮಂಜೂರು ಮಾಡಲಾಗುವುದು. ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಇಲಾಖೆಯ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಭರ್ತಿಯಾದ ಬಳಿಕ ಉಳಿದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಮಂಜೂರು ಮಾಡಲಾಗುವುದು.
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5ಕಿ.ಮೀ ದೂರದವರಾಗಿರಬೇಕು. ಈ ಸೌಲ್ಯ ಪಡೆಯಲು ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ವರಮಾನ ಪ್ರವರ್ಗ-1ಕ್ಕೆ 2.50 ಲಕ್ಷ ರೂ. ಹಾಗೂ ಇತರ ಅಲ್ಪಸಂಖ್ಯಾತ ವರ್ಗದವರಿಗೆ 2 ಲಕ್ಷ ರೂ. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ.
ಅರ್ಜಿ ನಮೂನೆ ಜೊತೆಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಹಿಂದಿನ ಕೋರ್ಸಿನ ಅಂಕಪಟ್ಟಿಯ ದೃಢೀಕೃತ ಪ್ರತಿ, ಎಸ್ಸೆಸೆಲ್ಸಿ ಅಂಕಪಟ್ಟಿ ದೃಢೀಕೃತ ಪ್ರತಿ, ಬ್ಯಾಂಕ್ ಪಾಸ್ಪುಸ್ತಕದ ಪ್ರತಿ, ಸ್ವಂತ ಸ್ಥಳದಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ ದಾಖಲೆ ಗಳನ್ನು ಲಗತ್ತಿಸಬೇಕು.
ಅರ್ಜಿ ನಮೂನೆಯನ್ನು ಇಲಾಖೆ -https://gokdom.kar.nic.in - ವೆಬ್ಸೈಟ್ ಅಥವಾ -https://dom.karnataka.gov.in/udupi- ನಿಂದ ಪಡೆದು, ಭರ್ತಿಮಾಡಿ ಎಲ್ಲಾ ದಾಖಲೆಗಳೊಂದಿಗೆ ಕಾಲೇಜಿನ ಮುಖಾಂತರ ಆಯಾ ತಾಲೂಕು ವ್ಯಾಪ್ತಿಗೆ ಬರುವ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ದೂರವಾಣಿ:0820-2574596), ಕುಂದಾಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ದೂರವಾಣಿ:08254-230370), ಕಾರ್ಕಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ದೂರವಾಣಿ:08258-231101) ಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.