ಮಕ್ಕಳೇ ನಿಜವಾದ ಸಂಪತ್ತು: ರಮೇಶ ಎಂ. ಬಾಯಾರ್
ಅಡ್ಯನಡ್ಕದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ
ಅಡ್ಯನಡ್ಕ, ಆ. 8: ಮಕ್ಕಳೇ ನಿಜವಾದ ಸಂಪತ್ತು. ಆ ಸಂಪತ್ತು ಹಾಳಾಗದಂತೆ ಆದರದಿಂದ ಪಾಲಿಸಿ ಬೆಳೆಸುವುದು ಗುರುಹಿರಿಯರ ಕರ್ತವ್ಯ ಎಂದು ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರ್ ನುಡಿದರು.
ಅವರು ಅಡ್ಯನಡ್ಕದ ಜನತಾ ಪ. ಪೂ. ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ವಾರಣಾಶಿ ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಿ. ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ನೆರವೇರಿಸಿದರು. ನೂತನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕುಂಞ್ಞ ನಾಯ್ಕ್, ಉಪಾಧ್ಯಕ್ಷ ವಿಶ್ವೇಶ್ವರ ಶಾಸ್ತ್ರಿ, ಕಾರ್ಯದರ್ಶಿ ಎನ್. ಗಣೇಶ್ ಪೆರ್ಲ ಉಪಸ್ಥಿತರಿದ್ದರು.
ಆಂಗ್ಲಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸುರೇಶ್ ವಂದಿಸಿದರು. ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.