ನಾನು ಬಿಜೆಪಿ ಕಾರ್ಯಕರ್ತ, ಜೆಡಿಎಸ್ ಅಭ್ಯರ್ಥಿಯಲ್ಲ: ಆರೀಫ್
ಉಡುಪಿ, ಆ.9: ಉಡುಪಿ ನಗರಸಭೆ ಚುನಾವಣೆ ಸಂಬಂಧ ಜೆಡಿಎಸ್ ಬಿಡುಗಡೆ ಮಾಡಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ನನ್ನ ಹೆಸರಿದ್ದು, ನಾನು ಬಿಜೆಪಿ ಕಾರ್ಯಕರ್ತನೇ ಹೊರತು ಜೆಡಿಎಸ್ ಅಭ್ಯರ್ಥಿ ಅಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರೀಫ್ ಸ್ಪಷ್ಟಪಡಿಸಿದ್ದಾರೆ.
‘ನಾನು ಕಳೆದ 13 ವರ್ಷಗಳಿಂದ ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನಾಗಿದ್ದೇನೆ. ಇತ್ತೀಚೆಗೆ ಜೆಡಿಎಸ್ ಪಕ್ಷದ ಪರವಾಗಿ ಪಕ್ಷದ ಮುಖಂಡರೊಬ್ಬರು ನನ್ನನ್ನು ಸಂಪರ್ಕಿಸಿ ಪಕ್ಷದ ಪರವಾಗಿ ಗುಂಡಿಬೈಲು ವಾರ್ಡ್ನಲ್ಲಿ ಸ್ಪರ್ಧಿಸಲು ಕೇಳಿಕೊಂಡಾಗ ನಾನು ಸ್ಪಷ್ಟವಾಗಿ ನಿರಾಕರಿಸಿದ್ದೆ. ಆದರೆ ಆ. 8ರಂದು ಪತ್ರಿಕೆ ಗಳಲ್ಲಿ ಪ್ರಕಟಗೊಂಡ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಗುಂಡಿ ಬೈಲ್ ವಾರ್ಡಿನ ಅಭ್ಯರ್ಥಿ ಎಂಬುದಾಗಿ ನಮೂದಿಸಲ್ಪಟ್ಟಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story