ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018: ವ್ಯಂಗ್ಯಚಿತ್ರ ಬಿಡುಗಡೆ
ಉಡುಪಿ, ಆ.10: ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018 ಸ್ವಚ್ಛತಾ ಆಂದೋಲನ ಕಾರ್ಯಕ್ರಮ ದೇಶಾದ್ಯಂತ ನಡೆಯುತ್ತಿದ್ದು, ಆ.31ರವರೆಗೆ ಕೇಂದ್ರ ಸರಕಾರ ನಿಯೋಜಿತ ಸಮೀಕ್ಷಾ ತಂಡ ಜಿಲ್ಲೆಗಳಿಗೆ ಭೇಟಿ ನೀಡಿ ಸ್ವಚ್ಛತಾ ಸಮೀಕ್ಷೆ ನಡೆಸುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸ್ವಚ್ಛತಾ ಆಂದೋಲನ ಬಗ್ಗೆ ಮಾಹಿತಿ, ತಿಳುವಳಿಕೆ ನೀಡಲು ಜಿಲ್ಲಾ ಮಟ್ಟ, ತಾಲೂಕು ಮಟ್ಟ ಮತ್ತು ಗ್ರಾಮ ಮಟ್ಟದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸ್ವಚ್ಛ ಸರ್ವೇಕ್ಷಣ್ ಗ್ರಾಮೀಣ-2018 ರ ಸಂದೇಶಗಳನ್ನು ಸಾರುವ ನಿಟ್ಟಿನಲ್ಲಿ ವ್ಯಂಗ್ಯ ಚಿತ್ರಕಾರ ಜೇಮ್ಸ್ ವಾಜ್ ರಚಿಸಿದ ವ್ಯಂಗ್ಯ ಚಿತ್ರಗಳನ್ನು ಶುಕ್ರವಾರ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಪಂ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಸದಸ್ಯ ಸುರೇಶ್ ಬಟಾ್ಟಡಿ ಮತ್ತಿತರರು ಉಪಸ್ಥಿತರಿದ್ದರು.
Next Story