ಮಂಗಳೂರು: ಬ್ಯಾರಿ ಅಧ್ಯಯನ ಪೀಠಕ್ಕೆ ಸಲಹಾ ಸಮಿತಿ ರಚನೆ
ಮಂಗಳೂರು, ಆ.11: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಘೋಷಿಸಲಾಗಿದ್ದ ‘ಬ್ಯಾರಿ ಅಧ್ಯಯನ ಪೀಠ’ ರಚನೆಗೆ ವೇದಿಕೆ ಸಿದ್ಧಗೊಳ್ಳುತ್ತಿವೆ. ಮಂಗಳೂರು ವಿಶ್ವವಿದ್ಯಾನಿಯಲದ ಪ್ರಭಾರ ಕುಲಪತಿ ಈ ನಿಟ್ಟಿನಲ್ಲಿ ಸಲಹಾ ಸಮಿತಿಯೊಂದನ್ನು ರಚಿಸಿ ಆದೇಶಿಸಿದ್ದಾರೆ.
ಅದರಂತೆ ಸಲಹಾ ಸಮಿತಿಯ ಅಧ್ಯಕ್ಷರಾಗಿ ಮಂಗಳೂರು ವಿವಿ ಕುಲಪತಿ, ಸದಸ್ಯರಾಗಿ ಮಂಗಳೂರು ವಿವಿ ಕುಲಸಚಿವರು, ಮಂಗಳೂರಿನ ಎಂ. ಅಹ್ಮದ್ ಬಾವಾ ಪಡೀಲ್, ಮುಹಮ್ಮದ್ ಕುಳಾಯಿ, ಅಬ್ದುರ್ರಹ್ಮಾನ್ ಕುತ್ತೆತ್ತೂರು, ಬಿ.ಎ. ಶಂಸುದ್ದೀನ್ ಮಡಿಕೇರಿ, ಹಾಜಿ ಇಬ್ರಾಹೀಂ ಕೋಡಿಜಾಲ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರು, ಆಹ್ವಾನಿತರಾಗಿ ಮಂಗಳೂರು ವಿವಿ ಹಣಕಾಸು ಅಧಿಕಾರಿ, ಸಂಚಾಲಕರಾಗಿ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಪ್ರೊ. ಅರಬಿ ಯು. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story