ತೋನ್ಸೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ
ಉಡುಪಿ, ಆ.11: ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕಳೆದ ಶೈಕ್ಷಣಿಕ ವರ್ಷ ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಸನ್ಮಾನಿಸಿ ಪ್ರಶಸ್ತಿ ವಿತರಿಸ ಲಾಯಿತು.
ಪ್ರಶಸ್ತಿ ವಿತರಿಸಿದ ಉಡುಪಿ ಜಾಮೀಯ ಮಸೀದಿಯ ಖತೀಬ್ ವೌಲಾನಾ ರಶೀದ್ ಉಮ್ರಿ ಮಾತನಾಡಿ, ವಿದ್ಯಾರ್ಥಿಯು ತನ್ನ ಶೈಕ್ಷಣಿಕ ಜೀವನದಲ್ಲಿ ಸನ್ನಡತೆಯಿಂದ ಇದ್ದಲ್ಲಿ, ಮುಂದೆ ಕೌಟುಂಬಿಕ ಹಾಗೂ ಸಾಮಾ ಜಿಕವಾಗಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವುದರಲ್ಲಿ ಸಂಶಯವಿಲ್ಲ. ಶಿಸ್ತು, ಸಂಯಮ, ಮಾನವೀಯತೆ, ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿ ಕೊಂಡರೆ ಮಾತ್ರ ಸಂಸ್ಥೆಗಳು ನೀಡುವ ಶಿಕ್ಷಣವು ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಬ್ರಹ್ಮಾವರ ಜಮೀಯತುಲ್ ಫಲಾಹ್ ಘಟಕ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್ ಮಾತನಾಡಿದರು. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಹಿರಿಯ ಟ್ರಸ್ಟಿ ವೌಲಾನಾ ಆದಂ ಸಾಹೇಬ್ ವಹಿಸಿದ್ದರು. ಆಡಳಿ ತಾಧಿಕಾರಿ ಅಸ್ಲಾಂ ಹೈಕಾಡಿ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ, ಅರೇಬಿಕ್ ಕಾಲೇಜಿನ ಪ್ರಾಂಶುಪಾಲೆ ಕುಲ್ಸೂಮ್ ಅಬೂಬಕರ್, ಮುಖ್ಯ ಶಿಕ್ಷಕಿ ಸುನಂದಾ, ಲವೀನಾ ಕ್ಲಾರಾ, ಮೀನಾ ನಝೀರ್ ಉಪಸ್ಥಿತರಿದ್ದರು.
ಶಿಕ್ಷಕಿ ಸುರೈಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನ್ಸಾ ವಂದಿಸಿದರು. ವಿದ್ಯಾರ್ಥಿ ಫಾತಿಮಾ ಹಮ್ರಾ ಕಾರ್ಯಕ್ರಮ ನಿರೂಪಿಸಿದರು.