‘ಸಮಗ್ರ ಭಾರತದ ಧ್ವನಿಯಾಗಿದ್ದ ಕ್ವಿಟ್ ಇಂಡಿಯಾ ಚಳುವಳಿ’
ಉಡುಪಿ, ಆ.11: ಬ್ರಿಟಿಷರ ದಬ್ಬಾಳಿಕೆಯಿಂದ ಈ ದೇಶವನ್ನು ಮುಕ್ತ ಗೊಳಸಲು 1942ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಬ್ರಿಟಿಷರ ವಿರುದ್ಧ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಅದೇ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳುವಳಿಯಾಗಿ ಮಾರ್ಪಟ್ಟಿತು. ಇದು ಬರೇ ಗಾಂಧೀಜಿಯವರ ಧ್ವನಿಯಾಗಿರದೆ ಸಮಸ್ತ ಭಾರತೀಯರ ಧ್ವನಿಯಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಹೇಳಿದ್ದಾರೆ.
ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಹಮ್ಮಿಕೊಂಡ 76ನೇ ವರ್ಷದಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಎಐಸಿಸಿ ಸದಸ್ಯ ಅಮೃತ್ ಶೆಣೈ ಮಾತನಾಡಿ, ಬ್ರಿಟಿಷರ ಕಪಿಮುಷ್ಠಿಯಿಂದ ಭಾರತವನ್ನು ರಕ್ಷಿಸಲು ಗಾಂಧೀಜಿ ಮುಖಂಡತ್ವದಲ್ಲಿ ಪ್ರಾರಂಭಗೊಂಡ ಕ್ವಿಟ್ ಇಂಡಿಯಾ ಚಳುವಳಿ ದೇಶ ಸ್ವಾತಂತ್ರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ ಹೋರಾಟ ಗಾರರನ್ನು ನೆನಪಿಸಿಕೊಳ್ಳುವುದು ಈ ಸಂದರ್ಭದಲ್ಲಿ ಅತೀ ಅಗತ್ಯ ಎಂದರು.
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ನಮ್ಮ ಹಿರಿಯರು ಹೋರಾಡಿದ್ದರೆ, ಇಂದು ನಾವು ಕೋಮುವಾದ, ಶೋಷಣೆ, ಅಸಮಾನತೆ, ದಬ್ಬಾಳಿಕೆ ಭಾರತ ಬಿಟ್ಟು ತೊಲಗಲಿ ಎಂದು ಹೋರಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಕಾರ್ಯದರ್ಶಿ ವೆರೋನಿಕ ಕರ್ನೇಲಿಯೋ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆ, ನಿತ್ಯಾನಂದ ಶೆಟ್ಟಿ, ಸೇವಾದಳದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪಕ್ಷದ ಮುಖಂಡರಾದ ಬಿ.ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿವಾಕರ್ ಕುಂದರ್, ಭಾಸ್ಕರ್ ರಾವ್ ಕಿದಿಯೂರು, ಶಬ್ಬೀರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ರಾಜ್, ಚಂದ್ರಿಕಾ ಶೆಟ್ಟಿ, ಜನಾರ್ದನ ಭಂಡಾರ್ಕರ್, ಮೈರ್ಮಾಡಿ ಸುಧಾಕರ ಶೆಟ್ಟಿ, ಅನಂತ ನಾಯ್ಕಿ, ಪೀರು ಸಾಹೇಬ್, ಜ್ಯೋತಿ ಹೆಬ್ಬಾರ್, ಡಾ. ಸುನಿತಾ ಶೆಟ್ಟಿ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ ಉಪಸ್ಥಿತರಿದ್ದರು.