ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿತ: ಸಂಚಾರ ವ್ಯತ್ಯಯ
ಸುಳ್ಯ, ಆ. 13: ಮಂಗಳೂರು-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ವ್ಯತ್ಯಯವಾಗಿದೆ.
ತಾಳತ್ತಮನೆ ಮತ್ತು ಮಡಿಕೇರಿ ರಸ್ತೆ ಸಂಪೂರ್ಣ ಕುಸಿದಿದ್ದು ರಸ್ತೆ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರ್ಯಾಯ ರಸ್ತೆಯ ಮದೆನಾಡು ಬಳಿ ರವಿವಾರ ರಾತ್ರಿಯಿಂದ ಗುಡ್ಡ ಕುಸಿಯಲು ಪ್ರಾರಂಭವಾಗಿದ್ದು, ಇದೀಗ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹೆದ್ದಾರಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಪ್ರಾರಂಭಿಸಲಾಗಿದೆ.
Next Story