ಕುಂದಾಪುರ: ಸಿಪಿಎಂ ಪಕ್ಷದಿಂದ ಉಚ್ಛಾಟನೆ
ಕುಂದಾಪುರ, ಆ.14: ಕಳೆದ 20 ವರ್ಷಗಳಿಂದ ಸಿಪಿಐಎಂ ಪಕ್ಷದಿಂದ ಸ್ಪರ್ಧಿಸಿ ಪುರಸಭೆಯ ಸದಸ್ಯರಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಗುಣರತ್ನ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
ಪಕ್ಷದ ಹಿರಿಯರು ಮಾಡಿದ ಮನವಿಯನ್ನು ಗುಣರತ್ನ ತಿರಸ್ಕರಿಸಿ ಕೋಮು ವಾದಿ ಬಿಜೆಪಿಗೆ ಸೇರ್ಪಡೆಗೊಂಡಿರುವುದನ್ನು ಸಿಪಿಐಎಂ ಕುಂದಾಪುರ ವಲಯ ಸಮಿತಿ ಖಂಡಿಸುತ್ತದೆ ಹಾಗೂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಸಿಪಿಎಂ ಕುಂದಾಪುರ ವಲಯ ಸಮಿತಿಯ ಕಾರ್ಯದರ್ಶಿ ಎಚ್.ನರಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story