ಶಿರಾಡಿ, ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್
ಚಾರ್ಮಾಡಿ ಘಾಟ್ ರಸ್ತೆ ಮಾತ್ರ ಸಂಚಾರಕ್ಕೆ ಮುಕ್ತ
ಮಂಗಳೂರು, ಆ.15: ಮಳೆಯಿಂದ ತತ್ತರಿಸಿರುವ ಶಿರಾಡಿ ಘಾಟ್ ಹಾಗೂ ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡು ಕುಸಿತದಂತಹ ಅಪಾಯಕಾರಿ ಸನ್ನಿವೇಶಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಸದ್ಯ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಮಾತ್ರ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Next Story