ಕೃಷ್ಣಾಪುರ: ಬದ್ರಿಯಾ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಸುರತ್ಕಲ್, ಆ.15: ಕೃಷ್ಣಾಪುರದ 7ನೇ ಬ್ಲಾಕ್ನ ಅಲ್ ಬದ್ರಿಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಇಂದು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಬಿ.ಎ.ನಝೀರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಧ್ವಜಾರೋಹಣ ನೆರವೇರಿಸಿ ನಂತರ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ, ಬಲಿದಾನಗಳು ನಮಗೆ ಆದರ್ಶವಾಗಬೇಕು. ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಗೌರವಾಧ್ಯಕ್ಷ ಬಿ.ಎಂ.ಮುಮ್ತಾಝ್ ಅಲಿ, ಉಪಾಧ್ಯಕ್ಷ ಅಬ್ದುಲ್ ಹಕೀಂ ಫಾಲ್ಕನ್, ಸಂಚಾಲಕ ಅಬ್ದುಲ್ ಹಮೀದ್ ಎಸ್.ಎಂ., ಕಾರ್ಯದರ್ಶಿ ಬಿ.ಎ.ಇಕ್ಬಾಲ್, ಜೊತೆ ಕಾರ್ಯದರ್ಶಿ ಫಿರೋಝ್ ಖಾನ್, ಕೋಶಾಧಿಕಾರಿ ಮುಹಮ್ಮದ್ ಅಲಿ ತೋಟ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ಲತೀಫ್, ಪ್ರಾಂಶುಪಾಲೆ ವಿಲ್ಮಾ ಡಿಮೆಲ್ಲೊ, ಮುಖ್ಯ ಶಿಕ್ಷಕ ಸತೀಶ್ ಎನ್., ಮುಬಿನ್, ಮುಹಮ್ಮದ್ ಅಲಿ ಮುಹಮ್ಮದ್ ಶೆಡ್ಯಾ, ಅನ್ಸಾರ್ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಮುಹಮ್ಮದ್ ಶಿಯಾಲ್ ಸ್ವಾಗತಿಸಿದರು. ಅಕೀಝ್ ರಹ್ಮಾನ್ ವಂದಿಸಿದರು. ಫಾತಿಮಾ ಅಫಾನ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.