ಉಳ್ಳಾಲ ಜುಮಾ ಮಸೀದಿ, ಸಯ್ಯಿದ್ ಮದನಿ ದರ್ಗಾ ಸಮಿತಿಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ
ಉಳ್ಳಾಲ, ಆ.15: ಬ್ರಿಟಿಷರ ಗುಲಾಮಗಿರಿಯಿಂದ ನಮಗೆ ಮುಕ್ತಿ ಸಿಗಬೇಕಾದರೆ ದೇಶದ ಸಹಸ್ರಾರು ಮಂದಿ ಹೋರಾಟ ಮಾಡಿ ತಮ್ಮ ಪ್ರಾಣ ಬಲಿ ನೀಡಿದ್ದಾರೆ. ಅದರ ಫಲವಾಗಿ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯವನ್ನು ಉಳಿಸುವ ಜವಾಬ್ದಾರಿ ನಮ್ಮಲ್ಲರದ್ದೂ ಆಗಿದೆ. ತನ್ನ ದೇಶವನ್ನು ಪ್ರೀತಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ನುಡಿದರು.
ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ಆಶ್ರಯದಲ್ಲಿ ನಡೆದ 72ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು ಅವರು ಮಾತನಾಡಿದರು.
ಖತೀಬ್ ಅಬ್ದುಲ್ ಅಝೀಝ್ ಬಾಖವಿ ದುಆಗೈದರು. ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಬಾವ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ, ಅಡಿಟರ್ ಯು.ಟಿ.ಇಲ್ಯಾಸ್, ಜತೆ ಕಾರ್ಯದರ್ಶಿಗಳಾದ ನೌಷಾದ್ ಮೇಲಂಗಡಿ, ಆಝಾದ್ ಇಸ್ಮಾಯೀಲ್, ಅರಬಿಕ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಜಿ ಅಮೀರ್, ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಕೋಶಾಧಿಕಾರಿ ಅಬ್ಬಾಸ್ ಹಾಜಿ ಪಿಲಾರ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫ ಅಬ್ದುಲ್ಲ, ಸದಸ್ಯರಾದ ಫಾರೂಕ್ ಉಳ್ಳಾಲ್, ಅಬೂಬಕರ್ ಕೋಟೆಪುರ, ಮಯ್ಯದ್ದಿ ಕೋಡಿ, ಮುಸ್ತಫ ಕಲ್ಲಾಪು, ಹಸನಬ್ಬ ಕೈಕೊ, ಹಮೀದ್ ಕೋಡಿ, ಅಲಿ ಮೂನು, ಅದ್ದ ಕೋಟೆಪುರ, ಅಬೂಬಕರ್ ಅಲಿ ನಗರ, ಹಮ್ಮಬ್ಬ ಕೋಟೇಪುರ, ಎಚ್.ಕೆ.ಮುಹಮ್ಮದ್, ಹಸೈನಾರ್, ಮಹ್ಮೂದ್ ಅಳೇಕಲ, ಅರಬಿಕ್ ಕಾಲೇಜು ಪ್ರಾಂಶುಪಾಲ ಉಸ್ಮಾನುಲ್ ಫೈಝಿ ತೋಡಾರ್ ಉಸ್ತಾದ್, ದಅವಾ ಕಾಲೇಜು ಪ್ರಾಂಶುಪಾಲ ಇಬ್ರಾಹೀಂ ಅಹ್ಸನಿ, ಹಿಫ್ಲುಲ್ ಕಾಲೇಜು ಪ್ರಾಂಶುಪಾಲ ಹಾಫಿಲ್ ಝೈನ್ ಸಖಾಫಿ, ಮದ್ರಸ ಸದರ್ ಮುಅಲ್ಲಿಮರು, ಶಾಲಾ ಕಾಲೇಜು, ಮುಖ್ಯೋಪಾಧ್ಯಾಯರು, ವಿದಾರ್ಥಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.
ಅಬ್ದುಸ್ಸಲಾಮ್ ಮದನಿ ಸ್ವಾಗತಿಸಿದರು.