ಕಾಟಿಪಳ್ಳ: ಮಿಸ್ಬಾ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸುರತ್ಕಲ್, ಆ.15: ಸ್ವಾತಂತ್ರ್ಯ ಸಂಗ್ರಾಮದ ಪ್ರತಿಯೊಂದು ಹೆಜ್ಜೆಗಳೂ ನಮ್ಮಲ್ಲಿ ದೇಶಪ್ರೇಮವನ್ನು ಮೂಡಿಸುವಲ್ಲಿ ಸಹಾಯಕವಾಗಿದೆ. ದೇಶಕ್ಕಾಗಿ ಹೋರಾಟ ಮಾಡಿದ ಮಹಾತ್ಮರು ತ್ಯಾಗ, ಬಲಿದಾನಗಳು ನಮಗೆ ಆದರ್ಶ ಪ್ರಾಯವಾಗಿದೆ. ವಿದ್ಯಾರ್ಥಿಗಳು ನಮ್ಮ ದೇಶದ ಮಹಾತ್ಮರು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಉತ್ತಮ ಪ್ರಜೆಗಳಾಗಿ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಟಿಪಳ್ಳದ ಮಿಸ್ಬಾ ಮಹಿಳಾ ಕಾಲೇಜ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿ ಮುಹಮ್ಮದ್ ಮುಬೀನ್ ಅಲ್ ಜುಬೈಲ್ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಬುಸಾಲಿ ಅನ್ಸಾಫ್ ಅಲ್ ಜುಬೈಲ್, ಮುಹಮ್ಮದ್ ಅಲಿ ತೋಟ, ಎಸ್.ಎಂ.ಹಮೀದ್, ಇಫ್ತಿಕಾರ್ ಅಹ್ಮದ್, ಫಿರೋಝ್ ಖಾನ್, ಉಸ್ಮಾನ್ ಪ್ಯಾರಡೈಸ್, ಖಾದರ್ ಬಾಂಬೆ, ಅಬ್ದುಲ್ ಸತ್ತಾರ್ ಭಾಗವಹಿಸಿದ್ದರು.
ಕಾಲೇಜಿನ ಅಧ್ಯಕ್ಷರಾದ ಬಿ.ಎಂ.ಮಮ್ತಾಝ್ ಅಲಿ, ಸಂಚಾಲಕರಾದ ಬಿ.ಎ.ನಝೀರ್, ಟ್ರಸ್ಟಿಗಳಾದ ಅಬ್ದುಲ್ ಹಕೀಮ್ ಫಾಲ್ಕನ್, ಬಾವ ಫಕ್ರುದ್ದೀನ್, ಪ್ರಾಂಶುಪಾಲೆ ಝಹೀದಾ ಜಲೀಲ್, ಮುಖ್ಯ ಗುರುಗಳಾದ ಹಬೀಬ್ ಸಖಾಫಿ, ಫಾರೂಖ್ ಸಖಾಫಿ, ಅಶ್ರಫ್ ಸಖಾಫಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲೆ ಸನಾ ಹುಸೈನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಲೋಲಾಕ್ಷಿ ವಂದಿಸಿದರು. ವಿದ್ಯಾರ್ಥಿನಿಯರು ದೇಶಭಕ್ತಿಗೀತೆ ಹಾಡಿದರು.