ಆ.16: ಎಸ್ವೈಎಸ್ನಿಂದ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
ಮಂಗಳೂರು, ಆ.15: ರಾಜ್ಯ ಸುನ್ನೀ ಯುವಜನ ಸಂಘ (ಎಸ್ವೈಎಸ್)ದಿಂದ ರಾಜ್ಯಾದ್ಯಂತ ಆ.1ರಿಂದ 15ರವರೆಗೆ ಪ್ರಜಾ ಸಂಗಮ ಕಾರ್ಯಕ್ರಮ ನಡೆಸುತ್ತಾ ಬರಲಾಗುತ್ತಿದೆ. ಸ್ವಾತಂತ್ರೋತ್ಸವದ ಅಂಗವಾಗಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಕಾರ್ಯಕ್ರಮ ಆ. ಆ.16ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕರಾದ ಬಿ.ಎಂ. ಫಾರೂಕ್, ವೇದವ್ಯಾಸ ಕಾಮತ್, ಐವನ್ ಡಿಸೋಜ, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ರಾಜ್ಯ ಎಸ್ವೈಎಸ್ ಪ್ರಧಾನ ಕಾರ್ಯದರ್ಶಿ ಎಂಎಸ್ಎಂ ಝೈನಿ ಕಾಮಿಲ್ ಸಮೇತ ಹಲವು ಸಾಮಾಜಿಕ ಧಾರ್ಮಿಕ ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಎಸ್ವೈಎಸ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ತಿಳಿಸಿದ್ದಾರೆ.
Next Story