ಪುನೀತ್ ಶೆಟ್ಟಿ ಹಲ್ಲೆ ಪ್ರಕರಣ: ಮಿಥುನ್ ರೈ ಸಹಿತ 15 ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ಮಂಗಳೂರು, ಆ.16: ಯುವ ಇಂಟಕ್ ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಪುನೀತ್ ಶೆಟ್ಟಿಯ ಮೇಲೆ ಕೆಲ ದಿನಗಳ ಹಿಂದೆ ನಡೆದ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಇಂಟಕ್ ವತಿಯಿಂದ ದ.ಕ. ಜಿಲ್ಲಾಧಿಕಾರಿಗೆ ಇಂದು ಮನವಿ ಸಲ್ಲಿಸಲಾಯಿತು.
15 ಮಂದಿ ಬಾಡಿಗೆ ಗೂಂಡಾಗಳು ಪುನೀತ್ ಶೆಟ್ಟಿ ಮೇಲೆ ಹಲ್ಲೆ ನಡೆಸಿ ಸುಮಾರು 1 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಆದ್ದರಿಂದ ಈ ಬಗ್ಗೆ ಮಿಥುನ್ ರೈ ಸಹಿತ ಎಲ್ಲಾ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮಿಥುನ್ ರೈ ವಿರುದ್ಧ ವಿವಿಧ ಠಾಣೆಗಳಲ್ಲಿ ಐದಾರು ಪ್ರಕರಣಗಳು ದಾಖಲಾಗಿದ್ದರೂ ಅವರಿಗೆ ಪೊಲೀಸ್ ಇಲಾಖೆ ಗನ್ಮ್ಯಾನ್ ವ್ಯವಸ್ಥೆ ಕಲ್ಪಿಸಿದೆ. ಮಿಥುನ್ ರೈ ಇದನ್ನು ದುರುಪಯೋಗ ಪಡಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮನವಿ ಸಲ್ಲಿಸಿದ ನಿಯೋಗದಲ್ಲಿ ಇಂಟಕ್ ಮುಖಂಡರಾದ ಮುದಸ್ಸಿರ್ ಕುದ್ರೋಳಿ, ನಾಗೇಂದ್ರ ಜಪ್ಪಿನಮೊಗರು, ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.
Next Story