ಮಡಿಕೇರಿ: ಗುಡ್ಡ ಕುಸಿದು ಮೂವರು ಮೃತ್ಯು
ಮಡಿಕೇರಿ ಆ.16: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಗುಡ್ಡ ಕುಸಿದ ಪರಿಣಾಮ ಮೂವರು ಮಣ್ಣು ಪಾಲಾದ ಘಟನೆ ಮಡಿಕೇರಿ ಸಮೀಪ ಕಾಟಕೇರಿ ಎಂಬಲ್ಲಿ ನಡೆದಿದೆ.
ಭೂ ಕುಸಿತಕ್ಕೆ ಸಿಲುಕಿ ಯಶವಂತ್, ವೆಂಕಟರಮಣ ಹಾಗೂ ಪವನ್ ಎಂಬವರು ಮೃತಪಟ್ಟವರಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಯತೀಶ್ ಎಂಬವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಗು ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
Next Story