ಕೇರಳ ಪ್ರಕೃತಿ ವಿಕೋಪ: ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಿಹಾರ ಸಾಮಗ್ರಿಗಳ ಸಂಗ್ರಹ
ಮಂಗಳೂರು, ಆ.17: ಕೇರಳದಲ್ಲಿ ಸುರಿದ ಭಾರಿ ಮಳೆ ಹಾಗೂ ನೆರೆ ಹಾವಳಿಯಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಸ್ವಂದಿಸುವ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥನ್ ಅವರ ಮನವಿಯ ಮೇರೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹ ಮಾಡುತ್ತಿದೆ.
ಪರಿಹಾರ ಸಾಮಾಗ್ರಿಗಳನ್ನು ಪಕ್ಷದ ಜಿಲ್ಳಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ (8861077701), ಆಶಾ ಡಿಸಿಲ್ವಾ, ಇಫ್ತಿಕಾರ್ ಯು.ಟಿ. (9449836871)ಅವರನ್ನು ಸಂಪರ್ಕಿಸಬಹುದು. ಆಸಕ್ತರು ಆಹಾರ ಪದಾರ್ಥಗಳು, ಸಾಬೂನು, ಟೂತ್ಬ್ರೆಷ್, ಹೊದಿಕೆ, ಕಂಬಳಿ, ಬಾತ್ಟವಲ್, ಅಕ್ಕಿ, ಬಟ್ಟೆ, ಸೀರೆ ಇನ್ನಿತರ ಸಾಮಾಗ್ರಿಗಳನ್ನು ನೀಡಬಹುದು.
ಈ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈಯ ನೇತೃತ್ವದಲ್ಲಿ ಕೇರಳದ ವಯನಾಡು ಜಿಲ್ಲೆಗೆ ಕಳುಹಿಸಿಕೊಡಲಾಗುವುದು ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ತಿಳಿಸಿದ್ದಾರೆ.