ಆ.19 : ಉಡುಪಿಗೆ ಸಚಿವ ದೇಶಪಾಂಡೆ
ಉಡುಪಿ, ಆ.18: ರಾಜ್ಯ ಕಂದಾಯ ಹಾಗೂ ಕೌಶಲಾಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಆ.19 ರವಿವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಪರಾಹ್ನ 1:30ಕ್ಕೆ ಉಡುಪಿಗೆ ಆಗಮಿಸಲಿರುವ ಸಚಿವ ದೇಶಪಾಂಡೆ, 2 ಕ್ಕೆ ಸಾರ್ವಜನಿಕರನ್ನು ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸುವರು. ಬಳಿಕ 2:30ಕ್ಕೆ ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಹಾನಿಗೆ ಒಳಗಾಗಿರುವ ಪ್ರದೇಶಗಳ ಪರಿವೀಕ್ಷಣೆ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story