ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ
ಕೊಡಗು, ಆ.19: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ನೆರೆ ಬಾಧಿತ ಕೊಡಗಿನಲ್ಲಿ ಸುಮಾರು ಒಂದು ಗಂಟೆ 15 ನಿಮಿಷಗಳ ಕಾಲ ವೈಮಾನಿಕ ಸಮೀಕ್ಷೆ ನಡೆಸಿದರು.
ಇಂದು ಅವರು ಮೈಸೂರು ವಿಮಾನ ನಿಲ್ದಾಣದಿಂದ ಹೊರಟು ಸೋಮವಾರಪೇಟೆ, ಶುಂಠಿ ಕೊಪ್ಪ, ಮಾದಾಪುರ, ಮುಕ್ಕೋಡ್ಲು, ಹಾರಂಗಿ ಹಿನ್ನೀರು ಪ್ರದೇಶ, ಸಿದ್ದಾಪುರ, ಕುಶಾಲನಗರ ಸುತ್ತಮುತ್ತಲಿನ ಪ್ರದೇಶಗಳ ಸಮೀಕ್ಷೆ ನಡೆಸಿದರು.
ನಂತರ ಪಿರಿಯಾಪಟ್ಟಣ ಹೆಲಿಪ್ಯಾಡಿನಲ್ಲಿ ಇಳಿದು ಮಡಿಕೇರಿಗೆ ತೆರಳಿದರು.
ಮಾರ್ಗಮಧ್ಯದಲ್ಲಿ ಮಳೆಹಾನಿಗೆ ಒಳಗಾದ ಕೆಲವು ಸ್ಥಳ ಪರಿಶೀಲನೆ ನಡೆಸುವರು ಎಂದು ಪ್ರಕಟನೆ ತಿಳಿಸಿದೆ
Next Story