ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ-ವಿದ್ಯಾರ್ಥಿ ವೇತನ ವಿತರಣೆ
ಉಡುಪಿ, ಆ.19: ಉಡುಪಿ ದೇವಾಡಿಗರ ಸೇವಾ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಟ್ಟದಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಪಡೆದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ರವಿವಾರ ಚಿಟ್ಪಾಡಿ ದೇವಾಡಿಗರ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು.
ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ದೇವಾಡಿಗ ಸಮಾಜವು ಇಂದು ಸ್ವಾಭಿಮಾನಿ ಸಂಘಟನೆಯಾಗಿ ಬೆಳೆದು ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
ಶ್ರೀ ಏಕನಾಥೇಶ್ವರಿ ಸಭಾಭವನವನ್ನು ಉದ್ಘಾಟಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಆರ್ಥಿಕವಾಗಿ ಹಾಗೂ ಸಾಮಾಜಿಕ ವಾಗಿ ಹಿಂದುಳಿದಿರುವ ಸಮಾಜ ಪ್ರಗತಿ ಕಾಣಬೇಕಾದರೆ ಸರಕಾರದ ಸಹಾಯ ಹಾಗೂ ಸಹಕಾರ ಅತಿಅಗತ್ಯ. ಸಮುದಾಯ ಭವನಗಳು ಆ ಸಮಾಜದ ಶಕ್ತಿ ಕೇಂದ್ರವಾಗಿದೆ. ವಿದ್ಯಾರ್ಥಿಗಳು ಆ ಸಮುದಾಯದ ಭವಿಷ್ಯದ ಆಸ್ತಿಯಾಗಿ ದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮ ಪಾಲ ಯು.ದೇವಾಡಿಗ, ಮಂಗಳೂರಿನ ನ್ಯೂರೊ ಸರ್ಜನ್ ಡಾ.ಕೆ.ವಿ.ದೇವಾ ಡಿಗ, ಮುಂಬೈ ದೇವಾಡಿಗರ ಸಂಘದ ಅಧ್ಯಕ್ಷ ರವಿ ಎಸ್.ದೇವಾಡಿಗ, ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಅಧ್ಯಕ್ಷ ಡಾ.ದೇವರಾಜ್ ಕೆ., ಬಾರ ಕೂರು ಏಕನಾಥೇಶ್ವರಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್, ಸಾಧು ಸಾಲ್ಯಾನ್, ವಾಸು ಎಸ್.ದೇವಾಡಿಗ, ರಮೇಶ್ ದೇವಾಡಿಗ, ನರಸಿಂಹ ದೇವಾ ಡಿಗ, ರತ್ನಾಕರ ಜಿ.ಎಸ್. ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸೀತಾರಾಮ ಕೆ. ವಹಿಸಿದ್ದರು. ಹಿರಿಯಡ್ಕ ಮೋಹನ್ದಾಸ್ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ್ ದೇವಾಡಿಗ ಸ್ವಾಗತಿಸಿದರು. ರತ್ನಾಕರ್ ದೇವಾ ಡಿಗ ಹಾಗೂ ಜ್ಯೋತಿ ಎಸ್.ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.