ಶೆಷಣೆಯಿಂದ ಮುಕ್ತರಾಗಲು ಆರ್ಥಿಕ ಸಬಲೀಕರಣ ಅಗತ್ಯ: ಮಹಾದೇವ ಸ್ವಾಮಿ
ಉಡುಪಿ, ಆ.19: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಆರ್ಥಿಕ ಸಬಲೀಕರಣ ಹೊಂದುವ ಮೂಲಕ ಶೋಷಣೆಯಿಂದ ಹೊರಬರಬೇಕೆಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹಾದೇವ ಸ್ವಾಮಿ ಎನ್. ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುತ್ತಿಗೆದಾರರ ಉಡುಪಿ ಜಿಲ್ಲಾ ಸಂಘವನ್ನು ರವಿವಾರ ಆದಿಉಡುಪಿ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ಗುತ್ತಿಗೆದಾರರ ಹಿತ ಕಾಯುವ ದೃಷ್ಟಿಯಿಂದ ರಾಜ್ಯ ಸಂಘವು 20 ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಸಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಗುತ್ತಿಗೆದಾರರಿಗೆ ಮೀಸಲಿಟ್ಟಿರುವ ಕಾಮಗಾರಿಗಳನ್ನು ಕೆಆರ್ಐಡಿಎಲ್ಗೆ ನೀಡಬಾರದೆಂದು ಸಮಾಜ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದು ಸಂಘದ ಮನವಿಯ ಪ್ರತಿಲವಾಗಿದೆ ಎಂದರು.
ಉಡುಪಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿ ಯರ್ ಚಂದ್ರಶೇಖರ್ ಕೆ.ಎಸ್. ಮಾತನಾಡಿ, ಕಾಮಗಾರಿಯ ಗುಣಮಟ್ಟಕ್ಕೆ ಮೀಸಲಾತಿ ಅನ್ವಯಿಸುವುದಿಲ್ಲ. ಸರಕಾರದ ಆದೇಶದ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದ ಗುತ್ತಿಗೆದಾರರಿಗೆ ಹಂಚಬೇಕಾದ ಅನುದಾನಗಳ ಬಗ್ಗೆ ಇಲಾಖೆಯಲ್ಲಿ ಸ್ಟಾವೇರ್ನ್ನು ಅಭಿವೃದ್ಧಿ ಪಡಿಸಲಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೊಸ ಗುತ್ತಿಗೆದಾರರು ತಾಳ್ಮೆ ಹಾಗೂ ಹೊಂದಾಣಿಕೆಯಿಂದ ನಡೆದು ಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಉಡುಪಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಭುಜಬಲಿ ಪಾಸಾನೆ, ಉಡುಪಿ ಪಂಚಾಯತ್ರಾಜ್ ಇಂಜಿನಿಯ ರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಉಮಾಶಂಕರ ರಾವ್, ಐಟಿಡಿಪಿ ಉಡುಪಿಯ ವಿಶ್ವನಾಥ ಶೆಟ್ಟಿ, ಸಂಘದ ಗೌರವಾಧ್ಯಕ್ಷ ನರಂಗ ಕುಂದರ್, ಜಿಲ್ಲಾಧ್ಯಕ್ಷ ಯು.ಪರಮೇಶ್ವರ, ದಸಂಸ ಮುಖಂಡರುಗಳಾದ ಸುಂದರ್ ಮಾಸ್ತರ್, ಮಂಜುನಾಥ ವಿ., ಪುಟ್ಟಸ್ವಾಮಿ ಉಪಸ್ಥಿತರಿದ್ದರು. ದಸಂಸ ಮುಖಂಡ ಎಸ್.ಎಸ್.ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.