ಅಕ್ರಮ ಮರ ಸಾಗಾಟ ಆರೋಪ: ಲಾರಿ ಸಹಿತ ಓರ್ವನ ವಶ
ಬಂಟ್ವಾಳ, ಆ. 21: ಅಕ್ರಮ ಮರ ಸಾಗಾಟ ಆರೋಪದ ಮೇರೆಗೆ ಲಾರಿ ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಅಗರಂಗಡಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಲಾರಿ ಚಾಲಕ ಫೈಝಲ್ ಎಂಬಾತನನ್ನು ವಶಕ್ಕೆಪಡೆದು, ಜಾಮೀನಿನ ಮೇಲೆ ಬಿಡುಗಡೆ ಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಗರಂಗಡಿ ಎಂಬಲ್ಲಿ ಲಾರಿಯೊಂದರಲ್ಲಿ ಮರಗಳನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 12 ಲಕ್ಷ ರೂ. ಸಾಗುವಣಿ ಮರಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕೆ, ಮನೋಜ್, ಲಕ್ಮೀನಾರಾಯಣ, ಸ್ಮೀತಾ, ಚಾಲಕ ಜಯರಾಮ್ ಕಾರ್ಯಚರಣೆ ನಡೆಸಿದ್ದರು.
Next Story